ಶೃಂಗೇರಿ: ಪರವಾನಿಗೆ ಇಲ್ಲದೆ ಜಲ್ಲಿ ಮತ್ತು ಎಂಸ್ಯಾಂಡ್ ಸಾಗಿಸುತ್ತಿದ್ದ ಹನ್ನೆರಡು ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .
ಎಸ್.ಕೆ.ಬಾರ್ಡರ್ ನಲ್ಲಿ ಪಿ.ಎಸ್.ಐ. ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೇ ಮತ್ತು ಸಿಬ್ಬಂದಿ 12 ಟಿಪ್ಪರ್ ಲಾರಿಗಳನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಲಾರಿಗಳಲ್ಲಿ ಜಲ್ಲಿ ಮತ್ತು ಎಂ ಸ್ಯಾಂಡ್ ನ್ನು ಪರವಾನಗಿ ಇಲ್ಲದೇ ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದಿದೆ.
ಎಲ್ಲಾ 12 ಟಿಪ್ಪರ್ ಲಾರಿ ಮತ್ತು ಚಾಲಕರನ್ನು ವಶಕ್ಕೆ ಪಡೆದಿದ್ದು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮುಖಾಂತರ ಲಾರಿ ಚಾಲಕರ ವಿರುದ್ಧ ಕಾನೂನಿನ ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟನೆ ತಿಳಿಸಿದೆ .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ