ಚಿಕ್ಕಮಗಳೂರು : ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ನಡೆಯಲಿರುವ ದತ್ತಜಯಂತಿ ಹಿನ್ನೆಲೆಯಲ್ಲಿ ಇಂದು ಮಾಲಾ ಧಾರಣೆ ಮಾಡಲಾಯಿತು
ನಗರದ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಶಾಸಕ ಸಿ.ಟಿ.ರವಿ ಸೇರಿ ಹಲವರಿಂದ ಮಾಲಾಧಾರಣೆ ನಡೆಯಿತು.
ನಗರದಲ್ಲಿ 100 ಕ್ಕೂ ಹೆಚ್ಚು ಭಕ್ತರು ಮಾಲಾ ಧಾರಣೆ ಮಾಡಿದ್ದು ಮುಂದಿನ ತಿಂಗಳ 6ರಂದು ಅನುಸೂಯ ಜಯಂತಿ 7 ರಂದು ಜಿಲ್ಲಾ ಕೇಂದ್ರದಲ್ಲಿ ಶೋಭ ಯಾತ್ರೆ 8 ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಪಾದುಕೆ ದರ್ಶನ' ಮಾಲಾ ವಿಸರ್ಜನೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪ್ರವಾಸಿಗರಿಗೆ ನಿರ್ಬಂಧ: ದತ್ತ ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಡಿ. 6 ಬೆಳಿಗ್ಗೆ 6 ರಿಂದ ಡಿ.9 ರ ಬೆಳಿಗ್ಗೆ 10 ಗಂಟೆಯವರೆಗೆ ಮುಳ್ಳಯ್ಯನಗಿರಿ ಬಾಬಾ ಬುಡನ್ ಗಿರಿ ಶ್ರೇಣಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಮಾಡಲಾಗಿದೆ

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ