ಗುರುವಾರ, ನವೆಂಬರ್ 24, 2022

ಎರಡು ಪ್ರತ್ಯೇಕ ಅಪಘಾತ ಪ್ರಕರಣ : 7 ಜನರಿಗೆ ಗಾಯ -ಆಸ್ಪತ್ರೆಗೆ ದಾಖಲು



ಚಿಕ್ಕಮಗಳೂರು :ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಏಳು ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾರ್ಮಾಡಿ ಘಾಟ್ ನ ತಿರುವಿನಲ್ಲಿಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಆಟೋದಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್ ನ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲಿದ್ದ ನಾಲ್ವರಿಗೆ ಪೆಟ್ಟಾಗಿದ್ದು ಕಕ್ಕಿಂಜೆ ಆಸ್ಪತ್ರೆಗೆ ರವಾನಿಸಲಾಗಿದೆ.

ಬಣಕಲ್ ಆಟೋದಲಿದ್ದ ಪ್ರಯಾಣಿಕರು ಧರ್ಮಸ್ಥಳ ಕ್ಕೆ ಹೋಗಿ ದರ್ಶನ ಮುಗಿಸಿ ಬರುವಾಗ ನಡೆದ ಅಪಘಾತ ಎರಡು ವಾಹನಗಳು ಜಖಂ ಗೊಂಡಿದೆ.

ಇನ್ನೊಂದು ಪ್ರಕರಣದಲ್ಲಿ ಬಿದರಳ್ಳಿ ಬಳಿ ಚಲಿಸುತ್ತಿದ್ದ ಆಟೋ ಗೆ ಹಿಂಬದಿಯಿಂದ ಕಾರು ಗುದ್ದಿದ್ದು ಎರಡು ವಾಹನಗಳು ಜಖಂ ಗೊಂಡಿವೆ.

ಆಟೋದಲಿದ್ದ ಮೂವರಿಗೆ ಹೆಚ್ಚಾಗಿ ಪೆಟ್ಟಾಗಿದ್ಫು  ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...