ಭಾನುವಾರ, ನವೆಂಬರ್ 13, 2022

ವಾಹನ ಕೆಟ್ಟು ನಿಂತು ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್


 

ವಾಹನ ಸವಾರರು ಹೈರಾಣ
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ  11 ನೇ ತಿರುವಿನಲ್ಲಿ   ಪೊಲೀಸ್ ಡಿಆರ್ ವಾಹನ ಕೆಟ್ಟು ಗಂಟೆ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು.
ಚಿಕ್ಕಮಗಳೂರಿನ ಪೊಲೀಸ್ ಡಿಆರ್ ವಾಹನ  ಕೆಟ್ಟು ನಿಂತಿದ್ದರಿಂದ ಪ್ರವಾಸಿಗರು ಪರದಾಡುವಂತಾಯಿತು.
ಎರಡು ಬದಿಯಿಂದ ವಾಹನಗಳು ಏಕಕಾಲದಲ್ಲಿ ಸಂಚರಿಸಲಾಗದೇ ಕಿ.ಮೀ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಒಂದು ಬದಿ ವಾಹನ ಸಾಗಲು ಹರಸಾಹಸ ಪಡಬೇಕಾಯಿತು.ವಾರಾಂತ್ಯ ಆದುದರಿಂದ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು.ಸಂಜೆ ಏಳು ಗಂಟೆ ವರೆಗೂ ವಾಹನ ರಿಪೇರಿ ಆಗಿರಲಿಲ್ಲ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...