ಸೋಮವಾರ, ನವೆಂಬರ್ 21, 2022

ತಮ್ಮ ಮೇಲಿನ ಹಲ್ಲೆ ವ್ಯವಸ್ಥಿತ ಸಂಚು: ರಾಜಕೀಯ ಪಿತೂರಿ-ಮೂಡಿಗೆರೆ ಶಾಸಕ ಎಂ. ಪಿ ಕುಮಾರಸ್ವಾಮಿ

 


ಚಿಕ್ಕಮಗಳೂರು: ಕಾಡಾನೆಯಿಂದ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಸಂದರ್ಭದಲ್ಲಿ ತಮ್ಮ ಮೇಲೆ ನಡೆದ ಹಲ್ಲೆ ಪೂರ್ವ ನಿಯೋಜಿತ ಹಾಗೂ ರಾಜಕೀಯ ಸಂಚು ಎಂದು ಮೂಡಿಗೆರೆ ಶಾಸಕ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮೂಡಿಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ತಾವು ಸ್ಥಳಕ್ಕೆತೆರಳಿದ್ದ ಸಂದರ್ಭದಲ್ಲಿ ಬಹಳಷ್ಟು ಜನ ಕೈಯಲ್ಲಿ ದೊಣ್ಣೆ ಇತರೆ ಆಯುಧಗಳು ಇದ್ದು ಎಂದು ದೂರಿದ್ದಾರೆ.
ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿ ಸಹವಾಲು ಸ್ವೀಕರಿಸಲು ತೆರಳಿದ್ದ ಸಂದರ್ಭದಲ್ಲಿ ಗುಂಪು ಕಟ್ಟಿಕೊಂಡು ಆಕ್ರೋಶಭರಿತರಾಗಿದ್ದ ಜನ ಚಪ್ಪಲಿಯಿಂದ ತಳ್ಳಿಸಿದ್ದೆ ಅಲ್ಲದೆ, ಅಟ್ಟಾಡಿಸಿಕೊಂಡು ಬಂದರು ಎಂದು ಘಟನೆಯ ಮಾಹಿತಿ ಕೊಟ್ಟಿದ್ದಾರೆ.
ತಮ್ಮ ಹಾಗೂ ಪೊಲೀಸರ ವಾಹನಗಳ ಮೇಲು ಕಲ್ಲು ತೂರಿದ್ದು ಇದೊಂದು ರಾಜಕೀಯ ವ್ಯವಸ್ಥಿತ ಪಿತೂರಿ ಎಂದು ಆರೋಪಿಸಿ ಮುಂದಿನ ದಿನಗಳಲ್ಲಿ ತಾವು ಚುನಾವಣೆಗೆ ನಿಲ್ಲಬಾರದು ಎನ್ನುವ ಷಡ್ಯಂತರ ಇದರ  ಹಿಂದೆ ಇದೆ ಎಂದರು.
ವ್ಯಾಪಕ ಖಂಡನೆ: ಮೂಡಿಗೆರೆ ಶಾಸಕ ಎಂಪಿ ಕುಮಾರ ಸ್ವಾಮಿ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ವಿವಿಧ ದಲಿತ ಪರ ಸಂಘಟನೆಗಳು ಖಂಡಿಸಿವೆ. ಇಂಥ ಘಟನೆಗಳ ವಿರುದ್ಧ ಸಂಘಟಿತ ಹೋರಾಟ ನಡೆಸುವಂತೆ ಕರೆ ನೀಡಿವೆ
ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿಯನ್ನು ಹತ್ತಿಕ್ಕುವ ಕೆಲಸವನ್ನು ಕೆಲ ಮೇಲ್ವರ್ಗದವರು ನಿರಂತರವಾಗಿ ಮಾಡುತ್ತಿದ್ದು ಅದರ ಮುಂದುವರಿದ ಭಾಗ ಈ ಘಟನೆ ಎಂದು ಸಾರ್ವಜನಿಕ ವಲಯದಲ್ಲೂ ಟೀಕೆ ವ್ಯಕ್ತವಾಗಿದೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...