ಸೋಮವಾರ, ನವೆಂಬರ್ 28, 2022

ಕಾಡಾನೆ ಸೆರೆ ಕಾರ್ಯಾಚರಣೆ ; ಆರಂಭಿಕ ಗೆಲುವು- ಒಂದು ಆನೆ ಸೆರೆ



ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಇತ್ತೀಚಿಗೆ ಮಹಿಳೆಯೊಬ್ಬರನ್ನು ಬಲಿ ತೆಗೆದುಕೊಂಡಿದ್ದ ಆನೆ ಕೊನೆಗೂ ಸೆರೆಯಾಗಿದೆ

ಕಾಡಾನೆ ಸೆರೆ ಹಿಡಿಯುವಂತೆ ಸ್ಥಳೀಯರು ಮತ್ತು ಜನಪ್ರತಿನಿಧಿಗಳ ನಿರಂತರ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರ ಕಾಡಾನೆ ಸೆರೆಗೆ ಆದೇಶ ಹೊರಡಿಸಿತ್ತು.

6 ಆನೆಗಳೊಂದಿಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಸಿಬ್ಬಂದಿ ಮೊದಲ ಹಂತದಲ್ಲಿ ಯಶಸ್ವಿಯಾಗಿದ್ದು ಬೆಳಗೋಡಿನ ಕುಂಡರ ಕಾಡು ಎಂಬಲ್ಲಿ ಆನೆಯೊಂದನ್ನು ಸೆರೆ ಹಿಡಿಯಲಾಗಿದೆ.

ಆನೆ ಸೆರೆಹಿಡಿದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಸ್ಥಳೀಯರು ಈ ಭಾಗದಲ್ಲಿ ಇನ್ನಷ್ಟು ಆನೆಗಳು ಇದ್ದು ಅವುಗಳನ್ನು ಸೆರೆ ಹಿಡಿಯಬೇಕೆಂಬ ಒತ್ತಾಯ ವ್ಯಕ್ತಪಡಿಸಿದ್ದಾರೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಆನೆ ಸೆರೆ ಕಾರ್ಯಾಚರಣೆ ಮುಂದುವರೆದಿದೆ. ಹಿಡಿದಿರುವ ಆನೆಯನ್ನು ಎಲ್ಲಿಗೆ ಸಾಗಿಸುವುದು ಎನ್ನುವ ಸಮಾಲೋಚನೆಯು ನಡೆದಿದೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...