ಮಂಗಳವಾರ, ನವೆಂಬರ್ 29, 2022

ಭ್ರಷ್ಟಾಚಾರ -ಪರ್ಸೆಂಟೇಜ್ ವ್ಯವಹಾರ ಬಿಜೆಪಿ ಸರ್ಕಾರದ ಸಾಧನೆ:ಡಿ.ಕೆ.ಶಿವಕುಮಾರ್

 

ಮೂಡಿಗೆರೆ:ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು  ಪರ್ಸಂಟೇಜ್ ವ್ಯವಹಾರ ಹೊರತುಪಡಿಸಿ ಜನಪರವಾಗಿ ಕೆಲಸ ಮಾಡಿಲ್ಲ ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ

     ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ  ಸಮಾವೇಶ ಉದ್ಘಾಟಿಸಿ ಬಿಜೆಪಿ ೩ ಬಾರಿ ನಡೆಸಿದ ಆಡಳಿತದಲ್ಲಿ ಜನರ ಬದುಕು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ.   ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ ಎಂದರು.

  ಇಲ್ಲಿಯವರೆಗೆ ಅಧಿಕಾರವಿದ್ದಾಗಲೇ ಜನರ ಬದುಕು ಹಸನು ಮಾಡಲು ಸಾಧ್ಯವಾಗಿಲ್ಲ. ಇನ್ನು ಅಧಿಕಾರ ಕಳೆದುಕೊಳ್ಳುವ ಸಮಯದಲ್ಲಿ  ಸಾಧ್ಯವೇ ಎಂದು ಪ್ರಶ್ನಿಸಿದರು.  

  ಬಿಜೆಪಿ  ಕೇವಲ ಭಾವನೆ, ಕೋಮು ಗಲಭೆಯಲ್ಲೇ ಕಾಲ ಕಳೆದಿದ್ದಾರೆ. ಜನರ ಬದುಕು ಹಸನಾಗಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ  ನ ಯಾವುದೇ ಅಭ್ಯರ್ಥಿ  ನಿಲ್ಲಿಸಿದರೂ ಅವರನ್ನು ಗೆಲ್ಲಿಸಿಕೊಡುವ ಕರ್ತವ್ಯ ನಿಮ್ಮದು ಎಂದು ಹೇಳಿದರು. 

ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್  ಮಾತನಾಡಿ ಫ್ಲೆಕ್ಸ್ ಹಾಕುವ ಬದಲು ಜನ ಸಂಪರ್ಕ ಮಾಡುವುದು ಒಳಿತು ಎಂದು ಕಿವಿ ಮಾತು ಹೇಳಿದರು


ಮಾಜಿ ಸಚಿವರಾದ ಮೋಟಮ್ಮ, ಬಿ.ಶಿವರಾಂ, ಕಾರ್ಯಧ್ಯಕ್ಷ ದೃವ ನಾರಾಯಣ್, ಬ್ಲಾಕ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಂಶು ಮಂತ್ ಇತರರು ಉಪಸ್ಥಿತರಿದ್ದರು. 

ನಾಗರತ್ನ ಮತ್ತು ನಯನ ಮೋಟಮ್ಮ ಪರ ಪ್ರತ್ಯೇಕವಾಗಿ ಭಾರಿ ಗಾತ್ರದ ಸೇಬಿನ ಹಾರ ಹಾಕುವ ಮೂಲಕ ಗುಂಪುಗಾರಿಕೆ ಬಿಂಬಿತಗೊಂಡಿತು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...