ಮಂಗಳವಾರ, ನವೆಂಬರ್ 22, 2022

ಶಾಸಕರ ಮೇಲೆ ಹಲ್ಲೆ : ದಲಿತ ದೌರ್ಜನ್ಯ ಪ್ರಕರಣ ದಾಖಲಿಸಲು ಆಗ್ರಹ



ಚಿಕ್ಕಮಗಳೂರು: ಆನೆ ತುಳಿತದಿಂದ ಸಾವಿಗೀಡಾದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಯವರನ್ನು ಜಾತಿ ನಿಂದನೆ ಮಾಡಿದವರ ವಿರುದ್ಧ ಕಾಯ್ದೆ ಅಡಿ ಪ್ರಕರಣ ದಾಖಲಿಸುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿವೆ.
ಹೊನ್ನೇಶ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಅಂದುಶಾಸಕರನ್ನು ಜಾತಿ ಸೂಚಕ ಪದಗಳಿಂದ ನಿಂದಿಸಿದ್ದು ಈವರೆಗೂ ಆ ಬಗ್ಗೆ ಪ್ರಕರಣ ದಾಖಲಿಸದೆ ಪೊಲೀಸರು ನಿರ್ಲಕ್ಷ ತಾಳಿದ್ದಾರೆ ಎಂದು ಆರೋಪಿಸಿದ್ದಾರೆ.
ಬೀಮ್ ಸೇನಾ ಅರ್ಮಿಯ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.
ಮುಗ್ಧರ ವಿರುದ್ಧ ಕ್ರಮ ಸಲ್ಲದು : ಮೂಡಿಗೆರೆ ಶಾಸಕರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಮುಗ್ಧರ ವಿರುದ್ಧ ಪ್ರಕರಣದ ದಾಖಲಿಸಿ ಬಂಧಿಸಿರುವುದು ಸರಿಯಲ್ಲ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ' ಕಾಂಗ್ರೆಸ್ ಹಾಗೂ ಜೆಡಿಎಸ್   ಅಭಿಪ್ರಾಯಸಿದೆ.
ಘಟನೆ ಹಿಂದೆ ಬಿಜೆಪಿಯವರದ್ದೇ ಕೆಲವರ ಷಡ್ಯಂತರ ಇದ್ದು ತಪ್ಪಿತಸ್ಥರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ರಾಧಾ  ಸುಂದರೇಶ್ ದೇವರಾಜ್ ಮತ್ತು ಮಂಜಪ್ಪ ಗೌಡ ಒತ್ತಾಯಿಸಿದ್ದಾರೆ




ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...