ಶುಕ್ರವಾರ, ನವೆಂಬರ್ 4, 2022

ನಿರಾಶೆ ಮೂಡಿಸಿದ ಸಿದ್ಧರಾಮಯ್ಯ ಭೇಟಿ ; ಮುಖಂಡರ ಟೀಕೆ


 

ಚಿಕ್ಕಮಗಳೂರು :ಮಾಜಿ ಮುಖ್ಯಮಂತ್ರಿ ಮತ್ತು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯನವರ ಭೇಟಿ ಕಾಂಗ್ರೆಸ್ ಪಾಳಯದಲ್ಲಿ ಹುರುಪು ಮೂಡಿಸುವ ಬದಲು  ಅಸಮಾಧಾನಕ್ಕೆ ಕಾರಣವಾಗಿದೆ .
ಖಾಸಗಿ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪಕ್ಷದ ಜಿಲ್ಲಾ ಮಟ್ಟದ ಪ್ರಮುಖರೊಂದಿಗೆ ಚರ್ಚಿಸುವ ಬದಲು ಏಕಾಂತದಲ್ಲೇ ಹೆಚ್ಚು ಕಾಲಹರಣ ಮಾಡಿದರು ಎನ್ನುವ ಆರೋಪ ಕೇಳಿಬಂದಿದೆ .
ಪ್ರತಿಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಜಿಲ್ಲೆಯ ಆಗುಹೋಗುಗಳ ಬಗ್ಗೆ ಪರಾಮರ್ಶೆ ನಡೆಸಿ ಮುಂದಿನ ಚುನಾವಣೆಯ ಸಿದ್ಧತೆಗಳ ಬಗ್ಗೆಯೂ ಸಮಾಲೋಚನೆ ನಡೆಸಬಹುದಿತ್ತು ಎನ್ನುವುದು ಹಲವರ ಅಭಿಪ್ರಾಯ .
ಖಾಸಗಿ ರೆಸಾರ್ಟ್ ನಲ್ಲಿ ತಂಗಿದ್ದ ಅವರನ್ನು  ಭೇಟಿ ಮಾಡಲು ಸಾಕಷ್ಟು ನಾಯಕರಿಗೆ ಸಾಧ್ಯವಾಗಲೇ ಇಲ್ಲ .ಕೆಲವರಷ್ಟೆ ಭೇಟಿಮಾಡಿ ಇತರರು ಅತ್ತ ಸುಳಿಯದಂತೆ 'ಬೇಲಿ' ನಿರ್ಮಿಸಿದ್ದರು ಎನ್ನುವ ಆರೋಪವೂ ವ್ಯಕ್ತವಾಗಿದೆ .
ಪಕ್ಷದ ಕಚೇರಿಗೆ ಆಗಮಿಸದೆ ,ಪಕ್ಷದ ವಿವಿಧ ಘಟಕಗಳ ಮುಖಂಡರೊಂದಿಗೆ ಸಮಾಲೋಚನೆಯನ್ನೂ ಮಾಡದೆ  ತಮ್ಮ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಎಡವಿದ್ದಾರೆ ಎನ್ನುವ ಟೀಕೆ ಕೇಳಿಬಂದಿದೆ .
ಅಧ್ಯಕ್ಷರ ವಿರುದ್ಧ ದೂರು : ಈ ನಡುವೆ ಪಕ್ಷದ ಅಧ್ಯಕ್ಷ ಅಂಶುಮಂತ್ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸದೆ ಏಕಪಕ್ಷೀಯವಾಗಿ ವರ್ತಿಸುತ್ತಿದೆ  ಎಂದು 1ಬಣ ಸಿದ್ಧರಾಮಯ್ಯನವರಲ್ಲಿ ದೂರು ಸಲ್ಲಿಸಿದೆ .
ತಮಾಷೆಯ ಸಂಗತಿಯೆಂದರೆ ಸಿದ್ಧರಾಮಯ್ಯನವರ ಚಿಕ್ಕಮಗಳೂರು ಭೇಟಿ ಸಾಕಷ್ಟು ಮುಖಂಡರಿಗೆ ಗೊತ್ತೇ ಇಲ್ಲ ಎನ್ನುವುದು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...