ಶುಕ್ರವಾರ, ನವೆಂಬರ್ 4, 2022

ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ: ನ.೧೩ ರಂದು ಸಾರ್ವಜನಿಕ ಪ್ರವೇಶ ನಿರ್ಬಂಧ

 


ಚಿಕ್ಕಮಗಳೂರು : ಚಿಕ್ಕಮಗಳೂರು ತಾಲ್ಲೂಕು, ಐ.ಡಿ ಪೀಠ ಗ್ರಾಮದ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ನ . ೧೩ರಂದು  ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ .

 ಶ್ರೀರಾಮಸೇನಾ ಕಾರ್ಯಕರ್ತರು ವಾರ್ಷಿಕ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿರುವ   ಹಿನ್ನೆಲೆಯಲ್ಲಿ ಸಂಸ್ಥೆಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನ.೧೩ರ ಬೆಳಿಗ್ಗೆ ೬ ಗಂಟೆಯಿಂದ ನ.೧೪ರ ಬೆಳಿಗ್ಗೆ ೧೦ ಗಂಟೆಯವರೆಗೆ ಪ್ರವಾಸಿಗರು ಬರುವುದನ್ನು ನಿಷೇಧಿಸಿ ಹಾಗೂ ಲಾಂಗ್ ಚಾಸಿಸ್‌ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಎನ್.ರಮೆಶ್ ಆದೇಶಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...