ಮಂಗಳವಾರ, ನವೆಂಬರ್ 29, 2022

ಕೊಪ್ಪ ಸರ್ವೆ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ -ಸಹನೆ ಕಳೆದುಕೊಂಡ ಜನರಿಂದ ಪ್ರತಿಭಟನೆ

 



ಕೊಪ್ಪ :ಇಲ್ಲಿನ ಭೂ ದಾಖಲೆಗಳ ಸರ್ವೆ ಇಲಾಖೆಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದೆ ಎಂದು ಆರೋಪಿಸಿ ನೊಂದವರು ಪ್ರತಿಭಟನೆ ನಡೆಸಿದ್ದಾರೆ.

 ಸಹಾಯಕ ನಿರ್ದೇಶಕರ ಕಚೇರಿ ಬಾಗಿಲ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದೆ ಅಲ್ಲದೆ ಒಂದು ಹಂತದಲ್ಲಿ ಬೀಗ ಹಾಕಲು ಹೊರಟಿದ್ದರು.

ದಾಖಲೆಗಳನ್ನು ಪಡೆಯಲು ತಿಂಗಳಗಟ್ಟಲೆ ಅಲೆಯಬೇಕಾಗಿದೆ. ಹಣವಿಲ್ಲದೆ ಯಾವುದೇ ಕೆಲಸಗಳು ನಡೆಯುತ್ತಿಲ್ಲ ಎಂದು ಅಧಿಕಾರಿ ಸಿಬ್ಬಂದಿ ವಿರುದ್ಧ ಕಿಡಿಕಾರಿದರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಸಮಾಧಾನ ಪಡಿಸಲು ಮಾಡಿದ ಯತ್ನ ಫಲಿಸದೆ ಅವರ ಎದುರಿನಲ್ಲಿ ಪ್ರತಿಭಟನೆ ನಿರತರು ಇಲಾಖೆ ವಿರುದ್ಧ ಕೂಗಾಡಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...