ಚಿಕ್ಕಮಗಳೂರು : ಹಿಂದೂಗಳ ವಿರುದ್ಧ ಅವಮಾನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು .
ಆಜಾದ್ ಮೈದಾನದಲ್ಲಿ ಪ್ರತಿಭಟನೆ ನಡೆಸಿ , ಅಶ್ಲೀಲವಾಗಿರುವುದು ಹಿಂದೂ ಪದವಲ್ಲ ' ಕಾಂಗ್ರೆಸ್ ಎಂದು ಆರೋಪಿಸಿ ಹಿಂದೂಗಳಿಗೆ ಅಪಮಾನ ಮಾಡಿರುವ ಜಾರಕಿಹೊಳಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು .
ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಹಿಂದೂಗಳ ವಿರುದ್ಧ ನಿರಂತರವಾಗಿ ದಾಳಿ ನಡೆಸುತ್ತಿದೆ ಮುಂಬರುವ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರ ನೀಡುವಂತೆ ಕರೆ ನೀಡಿದರು .
ಶಾಸಕ ಸಿ ಟಿ ರವಿ , ಪಕ್ಷದ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಇತರರು ಪಾಲ್ಗೊಂಡಿದ್ದರು .

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ