ಭಾನುವಾರ, ನವೆಂಬರ್ 6, 2022

ಅನಧಿಕೃತ ಕಟ್ಟಡ ನಿರ್ಮಾಣ : ದಾಖಲೆ ಸಲ್ಲಿಕೆಗೆ ಸೂಚನೆ

 


ಚಿಕ್ಕಮಗಳೂರು ನಗರದ ಹೊರವಲಯದ ಬೈಪಾಸ್ ರಸ್ತೆಗೆ ಹೊಂದಿಕೊಂಡಂತೆ ಇರೋ ಆಶ್ರಯ ಕಾಲೋನಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ ಪತ್ತೆಯಾಗಿದ್ದು ದಾಖಲೆ ಸಲ್ಲಿಸುವಂತೆ ನಗರಸಭೆ ಅಧಿಕಾರಿಗಳು ಸೂಚಿಸಿದ್ದಾರೆ .

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಆಯುಕ್ತ ಬಸವರಾಜ್ ನೇತತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ,ಮೇಲ್ನೋಟಕ್ಕೆ ಇದೊಂದು ಮಸಿದಿ ಎಂದು ತಿಳಿದು ಬಂದಿದ್ದು 3 ದಿನದೊಳಗೆ ಅಗತ್ಯ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿದೆ .

ಸೂಕ್ತ ದಾಖಲೆಗಳನ್ನು ನಿಗದಿತ ಸಮಯದಲ್ಲಿ ಒದಗಿಸದೆ ಇದ್ದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ಹೇಳಿದ್ದಾರೆ .


ಪತ್ರಕರ್ತನ ಮೇಲೆ ಹಲ್ಲೆ ಖಂಡನೆ :ಶೃಂಗೇರಿಯ ಪತ್ರಕರ್ತ ರಾಘವೇಂದ್ರ ಮೇಲೆ ಶಾಸಕ ಟಿ ಡಿ ರಾಜೇಗೌಡ ಬೆಂಬಲಿಗರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ .

ಪ್ರಸನ್ನ ಶೆಟ್ಟಿ ಮತ್ತು ಶ್ರೀನಿವಾಸ್ ಶೆಟ್ಟಿ ಎಂಬಿಬ್ಬರು  ನಗರದ ಸೋಮೇಶ್ವರ ಹೋಟೆಲ್ ಒಂದರ ಬಳಿ ಹಲ್ಲೆ ಮಾಡಿದ್ದುಬಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ .

ರಾಘವೇಂದ್ರ ಮೇಲೆ ನಡೆದ ಹಲ್ಲೆಯನ್ನು ಪತ್ರಕರ್ತರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಖಂಡಿಸಿವೆ .

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...