ಶನಿವಾರ, ನವೆಂಬರ್ 5, 2022

ಆಪರೇಷನ್ ಭೈರ ಕಾರ್ಯಾಚರಣೆ ಸ್ಥಗಿತ ; ಸ್ಥಳೀಯರಲ್ಲಿ ನಿರಾಸೆ



ಮೂಡಿಗೆರೆ :ತಾಲ್ಲೂಕಿನ ಊರುಬಗೆ ಅರಣ್ಯ ಪ್ರದೇಶದಲ್ಲಿ ನರಹಂತಕ ಕಾಡಾನೆಯನ್ನು ಹಿಡಿದು ಸಾಗಿಸುವ  ಆಪರೇಷನ್ ಬೈರ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಕಾರ್ಯಾಚರಣೆಗೆ ಬಂದಿದ್ದ 6 ದಸರಾ ಆನೆಗಳು ವಾಪಸ್ ತೆರಳಿದೆ. 
ಅಭಿಮನ್ಯುವಿಗೆ ಜ್ವರ ಭೇದಿ ಬಾಧಿಸಿದೆ. ಅಜ್ಜಯ್ಯ ಮತ್ತು ಗೋಪಾಲಸ್ವಾಮಿ ಆನೆಗೆ ಮದ ಬಂದಿದೆ. ಬೈರ ಮೂಡಿಗೆರೆ ತಾಲ್ಲೂಕಿನ ಅರಣ್ಯ ಪ್ರದೇಶದಿಂದ ತಪ್ಪಿಸಿಕೊಂಡು ಸಕಲೇಶಪುರ ಅಥವ ಮಂಗಳೂರು ಅರಣ್ಯ ಭಾಗಕ್ಕೆ ತೆರಳಿರುವ ಬಗ್ಗೆ ಸಂಶಯ ವ್ಯಕ್ತಪಡಿಸಲಾಗಿದೆ.

 ಈ ಕಾರಣದಿಂದ ಕಾರ್ಯಚರಣೆ ಮಾಡಲು ಸಾಧ್ಯವಿಲ್ಲವೆಂದು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಡಿಸಿಎಫ್ ಕ್ರಾಂತಿ  ತಿಳಿಸಿದ್ದಾರೆ.

ನಿರಾಶೆ :ಮೂಡಿಗೆರೆ ತಾಲ್ಲೂಕಿನ ವಿವಿಧ ಭಾಗಗಳಿಗೆ ಲಗ್ಗೆ ಇಡುತ್ತಿದ್ದ  ಕಾಡಾನೆ ಈವರೆಗೆ ಹಲವರನ್ನು ಬಲಿ ತೆಗೆದುಕೊಂಡಿದ್ದು ಸಾಕಷ್ಟು ಬೆಳೆಯನ್ನು ಹಾನಿ ಮಾಡಿದೆ .

ಆನೆ ಹಿಡಿಯುವಂತೆ ಸ್ಥಳೀಯರು ಸರ್ಕಾರದ ಮೇಲೆ ನಿರಂತರ ಒತ್ತಡ ಹೇರುತ್ತಿದ್ದು , ಕಾರ್ಯಾಚರಣೆ ಆರಂಭವಾಗಿ ಸ್ಥಳೀಯರು ಒಂದಿಷ್ಟು ನೆಮ್ಮದಿಯ ನಿಟ್ಟುಸಿರು ಬಿಡುವ ವೇಳೆಗೆ ಕಾರ್ಯಾಚರಣೆ ಸ್ಥಗಿತ ಕೊಂಡು ನಿರಾಶೆ ತಂದಿದೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...