ಶುಕ್ರವಾರ, ಡಿಸೆಂಬರ್ 2, 2022

ಶಾಸಕರ ತಾಳಕ್ಕೆ ತಕ್ಕ ಕುಣಿದ ಅಧಿಕಾರಿ : ಚುನಾವಣೆ ಮುಂದೂಡಿಕೆ : ಮಾಜಿ ಶಾಸಕ ಶ್ರೀನಿವಾಸ ಅಕ್ಷೇಪ



ಚಿಕ್ಕಮಗಳೂರು: ಶಾಸಕರ ಅಣತಿಯಂತೆ  ಚುನಾವಣಾ ಅಧಿಕಾರಿ ಚುನಾವಣೆ ನಡೆಸದ ಘಟನೆ ನಡೆದಿದ್ದು ಈ ಬಗ್ಗೆ ಕಾಂಗ್ರೆಸ್ ಪಕ್ಷ ಆಕ್ರೋಶ ಹೊರ ಹಾಕಿದೆ

ಚುನಾವಣೆ ನೋಟಿಫಿಕೇಶನ್ ಹೊರಡಿಸಿದ ಅಧಿಕಾರಿ ಆರೋಗ್ಯ ಸರಿಯಿಲ್ಲ ಎಂದು ಪಟ್ಟಣದಲ್ಲಿ ಓಡಾಡುವ ಮೂಲಕ ಶಾಸಕರ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ
ತರೀಕೆರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೆಟ್ಟದಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಚುನಾವಣೆ ನಡೆಯಬೇಕಿತ್ತು.
ಲೋಕೋಪಯೋಗಿ ಇಲಾಖೆ ಅಧಿಕಾರಿ ವಾಗೀಶ್ ಚುನಾವಣೆ ಅಧಿಕಾರಿಯಾಗಿ ನೋಟಿಫಿಕೇಶನ್ ಹೊರಡಿಸಿದ್ದರು.
ನೋಟಿಫಿಕೇಶನ್ ಹೊರಡಿಸಿ ಹುಷಾರಿಲ್ಲ ಎಂದು ತರೀಕೆರೆ ಪಟ್ಟಣದಲ್ಲಿ ಓಡಾಟ ನಡೆಸಿದ್ದು ಉಪವಿಭಾಗಾಧಿಕಾರಿಗಳೇ ಕಾರಲ್ಲಿ ತಂದು ಚುನಾವಣೆ ನಡೆಸುವಂತೆ ಸೂಚಿಸಿ ಬಿಟ್ಟು ಹೋಗಿದ್ದಾರೆ.
11 ಗಂಟೆಯಿಂದ 3 ಗಂಟೆವರೆಗೆ ಪಂಚಾಯಿತಿಯಲ್ಲೇ ಇದ್ದರೂ ಚುನಾವಣೆ ನಡೆಸಲಿಲ್ಲ ಎಂದು ಆರೋಪ ವ್ಯಕ್ತವಾಗಿದೆ.
ಶಾಸಕರು, ವೈದ್ಯರು ಹಾಗೂ ಆಂಬುಲೆನ್ಸ್ ಗೆ ಫೋನ್ ಮಾಡಿಕೊಂಡು 3 ಗಂಟೆಗೆ ಪೊಲೀಸ್ ಪ್ರೊಟಕ್ಷನ್ ನಲ್ಲಿ ಚುನಾವಣಾ ಅಧಿಕಾರಿ ತೆರಳಿದ್ದಾರೆ.
ಈ ಹಂತದಲ್ಲಿ ತೀವ್ರ ಮಾತಿನ ಚಕಮಕಿ ಪ್ರತಿಭಟನೆಯು ನಡೆದಿದೆ .ಚುನಾವಣೆ ನಡೆಸದ ತೀವ್ರ ಅಸಮಧಾನ ಹೊರ ಹಾಕಿರುವ ಕಾಂಗ್ರೆಸ್ ಮಾಜಿ ಶಾಸಕ ಶ್ರೀನಿವಾಸ್ ಮತ್ತು ಕಾರ್ಯಕರ್ತರು ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಡಿ.ಸಿ.ಗೆ ಮನವಿ ಸಲ್ಲಿಸಿದ್ದಾರೆ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...