ಶನಿವಾರ, ಡಿಸೆಂಬರ್ 3, 2022

ಮೂಡಿಗೆರೆ ತಾಲೂಕಿನಲ್ಲಿ ಮತ್ತೊಂದು ಪುಂಡಾನೇ ಸೆರೆ : ನೆಮ್ಮದಿಯ ನಿಟ್ಟುಸಿರು ಬಿಟ್ಟ ಕೃಷಿಕರು

 



 BIG NEWS ಚಿಕ್ಕಮಗಳೂರು: ಜಿಲ್ಲೆಯಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ  ಮತ್ತೊಂದು ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ.

ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಗಳಲ್ಲಿ ಒಂದನ್ನು ಮೊದಲ ದಿನವೇ ಸೆರೆ ಹಿಡಿಯಲಾಗಿತ್ತು

ಉಪಟಳ ನೀಡುತ್ತಿದ್ದ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತುಐದು ದಿನಗಳ ಹಿಂದೆ ಮೊದಲ ಯಶ ಕಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕುಂಡ್ರ ಗ್ರಾಮದಲ್ಲಿ ಪುಂಡಾನೆ ಸೆರೆ ಹಿಡಿದಿದ್ದರು.

ಇದೀಗ 2ನೇ ಕಾರ್ಯಾಚರಣೆಯಲ್ಲಿ ಮತ್ತೊಂದು ಪುಂಡಾನೆ ಸೆರೆ .5 ಸಾಕಾನೆಗಳಿಂದ ಸತತ ಕಾರ್ಯಾಚರಣೆ ನಡೆದಿದೆ. ಆನೆಗಳ ಜಾಡು ಪತ್ತೆ ಹಚ್ಚಲು ಡ್ರೋನ್ ಕ್ಯಾಮೆರಾ ಕೂಡ ಬಳಸಲಾಗಿತ್ತು

ಮತ್ತೊಂದು ಪುಂಡಾನೆ ಸೆರೆಗೆ ಕಾರ್ಯಾಚರಣೆ ಮುಂದುವರೆಯಲಿದ್ದುಸದ್ಯ ಎರಡು ಪುಂಡಾನೆ ಸೆರೆಯಿಂದ ಕೃಷಿಕರು ನಿಟ್ಟುಸಿರು ಬಿಟ್ಟಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...