ಶುಕ್ರವಾರ, ಡಿಸೆಂಬರ್ 2, 2022

ವ್ಯವಸ್ಥಾಪನ ಸಮಿತಿ ರದ್ದುಪಡಿಸಲು ಒತ್ತಾಯಿಸಿ SDPI ಆಶ್ರಯದಲ್ಲಿ ಪ್ರತಿಭಟನೆ

 



ಚಿಕ್ಕಮಗಳೂರು :ತಾಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕೆ ನೇಮಿಸಿರುವ ವ್ಯವಸ್ಥಾಪನಾ ಸಮಿತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಎಸ್‌ಡಿಪಿಐ ಆಶ್ರಯದಲ್ಲಿ ಪ್ರತಿಭಟನೆ ನಡೆದಿದೆ.

ಕೋಮು ಸಾಮರಸ್ಯದ ಕೇಂದ್ರವಾಗಿರುವ ಪೀಠಕ್ಕೆ ರಚಿಸಿರುವ 8 ಎಂಟು ಸದಸ್ಯರಿರುವ ಸಮಿತಿಯಲ್ಲಿ 7 ಸದಸ್ಯರು ಒಂದೇ ಸಮುದಾಯಕ್ಕೆ ಸೇರಿದ್ದು ಇದು ನ್ಯಾಯಾಲಯದ ಆದೇಶದ ಉಲ್ಲಂಘನೆ ಆಗಿದೆ ಎಂದು ಆರೋಪಿಸಿದ್ದಾರೆ.

 ನಾಮಕಾವಸ್ತೆಗೆ ಮುಸ್ಲಿಂ ಸಮುದಾಯದ ಒಬ್ಬ ಸದಸ್ಯರನ್ನು ಮಾತ್ರ ನೇಮಕ ಮಾಡಿದ್ದು , ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರಿಗೂ ಅವಕಾಶ ಕಲ್ಪಿಸಿಲ್ಲ ಎಂದು ಟೀಕಿಸಿದ್ದಾರೆ.

ಹಿಂದೂ ಮತ್ತು ಮುಸ್ಲಿಂ ಎರಡು ಸಮುದಾಯದ ಸಮಾನ ಸದಸ್ಯರು ಇಲ್ಲದ ಈ ಸಮಿತಿಯನ್ನು ತಕ್ಷಣ ವಿಸರ್ಜಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರ ತಪ್ಪು ಸಂದೇಶಗಳನ್ನು ನೀಡಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಸಂಕೀರ್ತನ ಯಾತ್ರೆಯೊಂದಿಗೆ ದತ್ತ ಜಯಂತಿಗೆ ಚಾಲನೆ; ಪೀಠದಲ್ಲಿ ಅನುಸೂಯಾ ಜಯಂತಿ

  ಚಿಕ್ಕಮಗಳೂರು :ಇಂದಿನಿಂದ ಮೂರು ದಿನ  ನಡೆಯುವ ದತ್ತ ಜಯಂತಿಗೆ ವಿದ್ಯುಕ್ತ ಚಾಲನೆ ದೊರಕಿದೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ನಗರದಲ್ಲಿ  ಬೋಳರಾಮೇಶ್ವರ ದೇವಾಲಯದ ...