ಚಿಕ್ಕಮಗಳೂರು :ತಾಲೂಕಿನ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕೆ ನೇಮಿಸಿರುವ ವ್ಯವಸ್ಥಾಪನಾ ಸಮಿತಿಯನ್ನು ರದ್ದುಪಡಿಸುವಂತೆ ಒತ್ತಾಯಿಸಿ ಎಸ್ಡಿಪಿಐ ಆಶ್ರಯದಲ್ಲಿ ಪ್ರತಿಭಟನೆ ನಡೆದಿದೆ.
ಕೋಮು ಸಾಮರಸ್ಯದ ಕೇಂದ್ರವಾಗಿರುವ ಪೀಠಕ್ಕೆ ರಚಿಸಿರುವ 8 ಎಂಟು ಸದಸ್ಯರಿರುವ ಸಮಿತಿಯಲ್ಲಿ 7 ಸದಸ್ಯರು ಒಂದೇ ಸಮುದಾಯಕ್ಕೆ ಸೇರಿದ್ದು ಇದು ನ್ಯಾಯಾಲಯದ ಆದೇಶದ ಉಲ್ಲಂಘನೆ ಆಗಿದೆ ಎಂದು ಆರೋಪಿಸಿದ್ದಾರೆ.
ನಾಮಕಾವಸ್ತೆಗೆ ಮುಸ್ಲಿಂ ಸಮುದಾಯದ ಒಬ್ಬ ಸದಸ್ಯರನ್ನು ಮಾತ್ರ ನೇಮಕ ಮಾಡಿದ್ದು , ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರಿಗೂ ಅವಕಾಶ ಕಲ್ಪಿಸಿಲ್ಲ ಎಂದು ಟೀಕಿಸಿದ್ದಾರೆ.
ಹಿಂದೂ ಮತ್ತು ಮುಸ್ಲಿಂ ಎರಡು ಸಮುದಾಯದ ಸಮಾನ ಸದಸ್ಯರು ಇಲ್ಲದ ಈ ಸಮಿತಿಯನ್ನು ತಕ್ಷಣ ವಿಸರ್ಜಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರ ತಪ್ಪು ಸಂದೇಶಗಳನ್ನು ನೀಡಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ